News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
inspirational

ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

125
Charaka

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.

ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ  ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ  ಕಾರಣಗಳಿರುತ್ತವೆ.  ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ  ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು  ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು ,  ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ. 

ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು  ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ  , ಸ್ಥೂಲ ಜೀರ್ಣ ಶಕ್ತಿ  ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.

ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ  ಹೇಳುತ್ತಾರೆ “ನಾನಾವೃತ  ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.

ವ್ಯಾಧಿಕ್ಷಮತ್ವ-  ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ  ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ  ಬೇಗನೆ  ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

Charaka

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,

1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ   ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ  ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.

2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ  ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ  ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.

3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ  ಒಳಗೊಂಡಂತೆ ಇದೆ.  

ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ  ಪ್ರಕಾರ  ಪೋಲಿಯೋ, ದಡಾರ  ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ  ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ  ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.

ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ  ಹಾಗು ಎರಡನೆಯದಾಗಿ  ಎಲ್ಲ ವ್ಯಕ್ತಿಗಳು  ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ  ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ  ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.

ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ  ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ  ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .

  • Mayoon N / Biotechnologist / Director of DRM Career Build Center , kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…