ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.
ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ ಕಾರಣಗಳಿರುತ್ತವೆ. ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು , ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ.
ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ , ಸ್ಥೂಲ ಜೀರ್ಣ ಶಕ್ತಿ ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.
ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ ಹೇಳುತ್ತಾರೆ “ನಾನಾವೃತ ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.
ವ್ಯಾಧಿಕ್ಷಮತ್ವ- ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ ಬೇಗನೆ ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,
1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.
2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.
3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ ಒಳಗೊಂಡಂತೆ ಇದೆ.
ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ ಪ್ರಕಾರ ಪೋಲಿಯೋ, ದಡಾರ ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.
ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ ಹಾಗು ಎರಡನೆಯದಾಗಿ ಎಲ್ಲ ವ್ಯಕ್ತಿಗಳು ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.
ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.