ಸಂಬಂಧ

ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

1103

ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.

ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.

  • ಆರ್ಥಿಕ ಸಮಸ್ಯೆಯಿಂದ ಮದುವೆಯಾಗದ ಜೋಡಿ

ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.

ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.

  • ಮಕ್ಕಳು ಮತ್ತು ಮೊಮ್ಮಕ್ಕಳಿಂದಲೇ ಮದುವೆ ದಿಬ್ಬಣ

ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.

ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ  ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.

ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…