ಸಂಬಂಧ

ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

1116

ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.

ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.

  • ಆರ್ಥಿಕ ಸಮಸ್ಯೆಯಿಂದ ಮದುವೆಯಾಗದ ಜೋಡಿ

ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.

ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.

  • ಮಕ್ಕಳು ಮತ್ತು ಮೊಮ್ಮಕ್ಕಳಿಂದಲೇ ಮದುವೆ ದಿಬ್ಬಣ

ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.

ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ  ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.

ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಸೊಪ್ಪು ತಿನ್ನೋದರಿಂದ ಆಗೋ ಪ್ರಯೋಜನಗಳನ್ನು ತಿಳಿದ್ರೆ, ನೀವ್ ತಿನ್ನದೇ ಸುಮ್ಮನೆ ಇರಲ್ಲ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…