News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

1120

ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.

ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.

  • ಆರ್ಥಿಕ ಸಮಸ್ಯೆಯಿಂದ ಮದುವೆಯಾಗದ ಜೋಡಿ

ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.

ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.

  • ಮಕ್ಕಳು ಮತ್ತು ಮೊಮ್ಮಕ್ಕಳಿಂದಲೇ ಮದುವೆ ದಿಬ್ಬಣ

ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.

ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ  ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.

ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…