ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…