ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….