ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…