News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

1425

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.

ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.

ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.

ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-

  • ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನವೇ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ತಯಾರು ಮಾಡಿಟ್ಟುಕೊಳ್ಳಬೇಕು. ಉದಾಹರಣೆಗೆ: ಸೀರೆ, ಹಣ್ಣು, ಅಲಂಕಾರಿಕ ವಸ್ತು, ಶುದ್ಧ ನೀರು ಇತ್ಯಾದಿ…
  • ಲಕ್ಷ್ಮಿಯನ್ನು ಉತ್ತರಾಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು. ಕೆಂಪು ಮತ್ತು ಹಳದಿ ಹೂವುಗಳನ್ನು ಬಳಸಬೇಕು. ದೀಪವನ್ನು ತುಪ್ಪದಿಂದ ಹಚ್ಚಬೇಕು.
  • ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು, ಶುದ್ಧ ನೀರಿನಿಂದ ಸ್ನಾನ ಮಾಡಬೇಕು. ಲಕ್ಷ್ಮಿ ವ್ರತ ಮಾಡುವವರೇ ಕಲಶ ಸ್ಥಾಪನೆ ಮಾಡಬೇಕು.
  • ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ. ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ, ಬಾಳೆಕಂಬ, ಮಾವಿನ ಎಲೆಗಳಿಂದ ಸಿಂಗರಿಸಬೇಕು.
  • ಕಲಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ/ಶುದ್ಧ ಅಕ್ಕಿ ಹಾಕಬೇಕು. ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ಅಥವಾ ಯಾವುದೇ ನಾಣ್ಯ, ದ್ರಾಕ್ಷಿ, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲುಸಕ್ಕರೆ ಹಾಕಬೇಕು. ನಂತರ ಒಂಬತ್ತು ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿಣ ಹಚ್ಚಿ, ಅರಿಶಿಣದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು. ಇದನ್ನು ಕಲಶದ ಚೊಂಬಿಗೆ ಕಟ್ಟಿದರೆ ಕಲಶ ತಯಾರಾಗುತ್ತದೆ.

  • ನಂತರ ಶುಭ್ರವಾಗಿ ತೊಳೆದ ತೆಂಗಿನಕಾಯಿಗೆ ಅರಿಶಿಣ ಹಚ್ಚಿಬೇಕು. ಅರಿಶಿಣ ಹಚ್ಚಿದ ತೆಂಗಿನಕಾಯಿಗೆ ಕುಂಕುಮ ಬೊಟ್ಟು ಇಡಬೇಕು. ಕಳಶದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು. ನಂತರ ತಟ್ಟೆಯೊಂದಕ್ಕೆ ಅಕ್ಕಿ ಹಾಕಿ ಇದರ ಮೇಲೆ ಕಲಶವನ್ನು ಇಡಬೇಕು. ಅರಿಶಿಣವನ್ನು ಸ್ವಲ್ಪ ನೀರಿನಿಂದ ಮಿಶ್ರಣ ಮಾಡಿ ಒಂದು ನಾಣ್ಯ ತೆಗೆದುಕೊಂಡು ಅದರ ಹಿಂದೆ ಹಾಕಬೇಕು. ನಂತರ ದೇವರ ಬಳಿ ಇಚ್ಛೆಯನ್ನು ಹೇಳಿಕೊಂಡು ದೇವಿಯನ್ನು ಬೇಡಿ ಸಂಕಲ್ಪ ಮಾಡಿಕೊಳ್ಳಬೇಕು. ನಂತರ ದೇವಿಯನ್ನು ಆವಾಹನೆ ಮಾಡಬೇಕು ಅಂದರೆ ಪ್ರಾಣ ಪ್ರತಿಷ್ಠಾಪನೆ.

  • ಇಷ್ಟಾದ ನಂತರ ಲಕ್ಷ್ಮಿ ದೇವಿಗೆ ಪ್ರಾಣಪ್ರತಿಷ್ಠಾಪನೆ ಮಾಡಬೇಕು. ಇದಕ್ಕೆ ಷೋಡಶೋಪಚಾರ ಪೂಜೆಯೆಂದು ಕರೆಯಲಾಗುತ್ತದೆ. ದೇವಯು ತನ್ನ ಎಲ್ಲ ಆಂಗಾಂಗ, ಪರಿವಾರ, ಆಯುಧ ಮತ್ತು ಶಕ್ತಿಸಹತಿವಾಗಿ ಬಂದು ಮೂರ್ತಿಯಲ್ಲಿ ಪ್ರತಿಷ್ಟಿತಳಾಬೇಕು ಮತ್ತು ನಮ್ಮ ಪೂಜೆಯನ್ನು ಸ್ವೀಕರಿಸಬೇಕು ಎಂದು ದೇವತೆಯಲ್ಲಿ ಸಂಪೂರ್ಣ ಶರಣಾಗತಭಾವದಿಂದ ಮಾಡುವ ಪ್ರಾರ್ಥನೆಯೆ ಪ್ರಾಣಪ್ರತಿಪ್ಠಾಪನೆ ಎಂದು ಕರೆಯಲಾಗುತ್ತದೆ.
  • ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿ ಕೈಯಲ್ಲಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವುಗಳನ್ನು ತೆಗೆದುಕೊಳ್ಳಬೇಕು. ದೇವಿಯ ಸಹಸ್ರ ನಾಮವನ್ನು ಹೇಳಿ ಕೊನೆಗೆ ನಮಃ ಎಂದು ಹೇಳಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವನ್ನು ದೇವತೆಗೆ ಅರ್ಪಿಸಿ ನಮಸ್ಕರಿಸಬೇಕು.
  • ಪ್ರಾಣ ಪ್ರತಿಷ್ಟಾಪನೆ ಬಳಿಕ ನಂತರ ಲಕ್ಷ್ಮಿ ದೇವಿಗೆ ಸೀರೆಯನ್ನು ಉಡಿಸಿ, ಅಲಂಕಾರ ಮಾಡಬೇಕು.

ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.

ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.

ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.

 

ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.

ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.

ದೇವಿಯ ವಿಸರ್ಜನೆ…

ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.

ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.

ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.

ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.

ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.

ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.

ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.