ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…