ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…