News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆಧ್ಯಾತ್ಮ

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

1408

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.

ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.

ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.

ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-

  • ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನವೇ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ತಯಾರು ಮಾಡಿಟ್ಟುಕೊಳ್ಳಬೇಕು. ಉದಾಹರಣೆಗೆ: ಸೀರೆ, ಹಣ್ಣು, ಅಲಂಕಾರಿಕ ವಸ್ತು, ಶುದ್ಧ ನೀರು ಇತ್ಯಾದಿ…
  • ಲಕ್ಷ್ಮಿಯನ್ನು ಉತ್ತರಾಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು. ಕೆಂಪು ಮತ್ತು ಹಳದಿ ಹೂವುಗಳನ್ನು ಬಳಸಬೇಕು. ದೀಪವನ್ನು ತುಪ್ಪದಿಂದ ಹಚ್ಚಬೇಕು.
  • ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು, ಶುದ್ಧ ನೀರಿನಿಂದ ಸ್ನಾನ ಮಾಡಬೇಕು. ಲಕ್ಷ್ಮಿ ವ್ರತ ಮಾಡುವವರೇ ಕಲಶ ಸ್ಥಾಪನೆ ಮಾಡಬೇಕು.
  • ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ. ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ, ಬಾಳೆಕಂಬ, ಮಾವಿನ ಎಲೆಗಳಿಂದ ಸಿಂಗರಿಸಬೇಕು.
  • ಕಲಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ/ಶುದ್ಧ ಅಕ್ಕಿ ಹಾಕಬೇಕು. ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ಅಥವಾ ಯಾವುದೇ ನಾಣ್ಯ, ದ್ರಾಕ್ಷಿ, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲುಸಕ್ಕರೆ ಹಾಕಬೇಕು. ನಂತರ ಒಂಬತ್ತು ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿಣ ಹಚ್ಚಿ, ಅರಿಶಿಣದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು. ಇದನ್ನು ಕಲಶದ ಚೊಂಬಿಗೆ ಕಟ್ಟಿದರೆ ಕಲಶ ತಯಾರಾಗುತ್ತದೆ.

  • ನಂತರ ಶುಭ್ರವಾಗಿ ತೊಳೆದ ತೆಂಗಿನಕಾಯಿಗೆ ಅರಿಶಿಣ ಹಚ್ಚಿಬೇಕು. ಅರಿಶಿಣ ಹಚ್ಚಿದ ತೆಂಗಿನಕಾಯಿಗೆ ಕುಂಕುಮ ಬೊಟ್ಟು ಇಡಬೇಕು. ಕಳಶದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು. ನಂತರ ತಟ್ಟೆಯೊಂದಕ್ಕೆ ಅಕ್ಕಿ ಹಾಕಿ ಇದರ ಮೇಲೆ ಕಲಶವನ್ನು ಇಡಬೇಕು. ಅರಿಶಿಣವನ್ನು ಸ್ವಲ್ಪ ನೀರಿನಿಂದ ಮಿಶ್ರಣ ಮಾಡಿ ಒಂದು ನಾಣ್ಯ ತೆಗೆದುಕೊಂಡು ಅದರ ಹಿಂದೆ ಹಾಕಬೇಕು. ನಂತರ ದೇವರ ಬಳಿ ಇಚ್ಛೆಯನ್ನು ಹೇಳಿಕೊಂಡು ದೇವಿಯನ್ನು ಬೇಡಿ ಸಂಕಲ್ಪ ಮಾಡಿಕೊಳ್ಳಬೇಕು. ನಂತರ ದೇವಿಯನ್ನು ಆವಾಹನೆ ಮಾಡಬೇಕು ಅಂದರೆ ಪ್ರಾಣ ಪ್ರತಿಷ್ಠಾಪನೆ.

  • ಇಷ್ಟಾದ ನಂತರ ಲಕ್ಷ್ಮಿ ದೇವಿಗೆ ಪ್ರಾಣಪ್ರತಿಷ್ಠಾಪನೆ ಮಾಡಬೇಕು. ಇದಕ್ಕೆ ಷೋಡಶೋಪಚಾರ ಪೂಜೆಯೆಂದು ಕರೆಯಲಾಗುತ್ತದೆ. ದೇವಯು ತನ್ನ ಎಲ್ಲ ಆಂಗಾಂಗ, ಪರಿವಾರ, ಆಯುಧ ಮತ್ತು ಶಕ್ತಿಸಹತಿವಾಗಿ ಬಂದು ಮೂರ್ತಿಯಲ್ಲಿ ಪ್ರತಿಷ್ಟಿತಳಾಬೇಕು ಮತ್ತು ನಮ್ಮ ಪೂಜೆಯನ್ನು ಸ್ವೀಕರಿಸಬೇಕು ಎಂದು ದೇವತೆಯಲ್ಲಿ ಸಂಪೂರ್ಣ ಶರಣಾಗತಭಾವದಿಂದ ಮಾಡುವ ಪ್ರಾರ್ಥನೆಯೆ ಪ್ರಾಣಪ್ರತಿಪ್ಠಾಪನೆ ಎಂದು ಕರೆಯಲಾಗುತ್ತದೆ.
  • ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿ ಕೈಯಲ್ಲಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವುಗಳನ್ನು ತೆಗೆದುಕೊಳ್ಳಬೇಕು. ದೇವಿಯ ಸಹಸ್ರ ನಾಮವನ್ನು ಹೇಳಿ ಕೊನೆಗೆ ನಮಃ ಎಂದು ಹೇಳಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವನ್ನು ದೇವತೆಗೆ ಅರ್ಪಿಸಿ ನಮಸ್ಕರಿಸಬೇಕು.
  • ಪ್ರಾಣ ಪ್ರತಿಷ್ಟಾಪನೆ ಬಳಿಕ ನಂತರ ಲಕ್ಷ್ಮಿ ದೇವಿಗೆ ಸೀರೆಯನ್ನು ಉಡಿಸಿ, ಅಲಂಕಾರ ಮಾಡಬೇಕು.

ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.

ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.

ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.

 

ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.

ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.

ದೇವಿಯ ವಿಸರ್ಜನೆ…

ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.

ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.

ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.

ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.

ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.

ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.

ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.