ವಿಜ್ಞಾನ

ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

61

ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ.

ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಅವಿರತ ಪ್ರಯತ್ನವನ್ನು ಮುಂದುವರಿಸಿದ್ದಾರೆ.

ಸೆ.7ರಂದು ನಸುಕಿನ ಜಾವ ಚಂದ್ರನಿಂದ 2.1 ಕಿ.ಮೀ. ಎತ್ತರದಲ್ಲಿರುವಾಗ ನಿಗೂಢ ರೀತಿಯಲ್ಲಿ ಸಂಪರ್ಕ ಕಳೆದುಕೊಂಡಿದ್ದ ಲ್ಯಾಂಡರ್‌ ಇರುವ ಜಾಗವನ್ನು ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್‌ ಭಾನುವಾರ ಪತ್ತೆ ಹಚ್ಚಿತ್ತು. ವಿಶೇಷ ಎಂದರೆ, ಇಸ್ರೋ ವಿಜ್ಞಾನಿಗಳು ಯಾವ ಜಾಗದಲ್ಲಿ ಲ್ಯಾಂಡರ್‌ ಅನ್ನು ಇಳಿಸಲು ಉದ್ದೇಶಿಸಿದ್ದರೋ ಅದಕ್ಕೆ ಸಮೀಪದಲ್ಲೇ ಲ್ಯಾಂಡರ್‌ ಬಿದ್ದಿರುವುದು ಆರ್ಬಿಟರ್‌ ಸೆರೆ ಹಿಡಿದಿರುವ ಚಿತ್ರದಲ್ಲಿ ಗೋಚರವಾಗಿದೆ ಎಂದು ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.

ಲ್ಯಾಂಡರ್‌ ಜತೆಗಿನ ಸಂಪರ್ಕವನ್ನು ಮರುಸ್ಥಾಪಿಸಲು ಸಾಧ್ಯವೇ ಎಂಬ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನೂ ವಿಜ್ಞಾನಿಗಳು ಆರಂಭಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್‌ ಹಾಗೂ ಕಮಾಂಡ್‌ ನೆಟ್‌ವರ್ಕ್ (ಇಸ್ಟ್ರಾಕ್‌) ಕೇಂದ್ರದಲ್ಲಿನ ವಿಜ್ಞಾನಿಗಳು ಈ ಸಂಬಂಧ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.ಲ್ಯಾಂಡರ್‌ನಲ್ಲಿನ ವ್ಯವಸ್ಥೆ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದರೆ ಮಾತ್ರ ಸಂಪರ್ಕ ಮರುಸಾಧಿಸಬಹುದು. ಆದರೆ ಆ ಸಂಭವ ಇಲ್ಲದ ಕಾರಣ ಮರುಸಂಪರ್ಕ ಸಾಧ್ಯತೆ ಕ್ಷೀಣವಾಗಿದೆ ಎಂದೂ ಹೇಳಿದ್ದಾರೆ.

ಇಸ್ರೋ ಲ್ಯಾಂಡರ್‌ ಅನ್ನು ಪತ್ತೆ ಹಚ್ಚಿದ್ದು ಹೇಗೆ?:ಲ್ಯಾಂಡರ್‌ನಿಂದ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಲ್ಯಾಂಡರ್‌ ಇಳಿಯಲು ನಿಗದಿಯಾಗಿದ್ದ ಸ್ಥಳವನ್ನೇ ಗುರಿಯಾಗಿಸಿ, ಚಂದ್ರನ ಸುತ್ತಲೂ ಸುತ್ತುತ್ತಿರುವ ಆರ್ಬಿಟರ್‌ ಶನಿವಾರ ಫೋಟೋವೊಂದನ್ನು ಕ್ಲಿಕ್ಕಿಸಿತ್ತು. ಈ ಫೋಟೋದಲ್ಲಿ ಅಸ್ಪಷ್ಟವಸ್ತುವೊಂದು ಗೋಚರವಾಗಿತ್ತು. ಆದರೆ ಈ ವೇಳೆ ಫೋಟೋದಲ್ಲಿ ಸೆರೆಯಾಗಿದ್ದು ಲ್ಯಾಂಡರ್‌ ಹೌದೋ ಅಲ್ಲವೋ ಎಂಬುದು ಇಸ್ರೋಗೆ ಖಚಿತವಿರಲಿಲ್ಲ. ಅದಕ್ಕಾಗಿ ಅದೇ ಅಕ್ಷಾಂಶ ಮತ್ತು ರೇಖಾಂಶದಲ್ಲಿ ಹಿಂದಿನ ದಿನ ಆರ್ಬಿಟರ್‌ ತೆಗೆದಿದ್ದ ಫೋಟೋಗಳನ್ನೇ ತಾಳೆ ಹಾಕಲಾಯಿತು. 
ಈ ವೇಳೆ ಹಿಂದಿನ ದಿನದ ಫೋಟೋದಲ್ಲಿ ಲ್ಯಾಂಡರ್‌ ಬಿದ್ದ ಸ್ಥಳದಲ್ಲಿ ಯಾವುದೇ ವಸ್ತುಗಳ ಕುರುಹು ಸಿಕ್ಕಿರಲಿಲ್ಲ. ಹೀಗಾಗಿ ತಾವು ಸೆರೆಹಿಡಿದಿದ್ದು ವಿಕ್ರಂ ಲ್ಯಾಂಡರ್‌ನದ್ದೇ ಎಂದು ಇಸ್ರೋ ವಿಜ್ಞಾನಿಗಳಿಗೆ ಖಚಿತವಾಯ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.