ಆಧ್ಯಾತ್ಮ

ವಿಜ್ಞಾನಿಯಾಗಿ ಆಯ್ಕೆಆಗಿದ್ದ ಇವರು, ಆಧ್ಯಾತ್ಮಿಕ ಗುರುಗಳಾಗಿದ್ದರ ಹಿಂದೆ ಇದೆ ಒಂದು ರೋಚಕ ಕತೆ..!ತಿಳಿಯಲು ಈ ಲೇಖನ ಓದಿ…

10087

ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.

ಶ್ರೀಗಳ ಜನನ ಮತ್ತು ಬಾಲ್ಯ:-

ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.

ಶ್ರೀಗಳ ವಿದ್ಯಾಭ್ಯಾಸ:-

ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.

ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.

ಶ್ರೀಗಳ ಎಂಜಿನಿಯರಿಂಗ್ ಪದವಿ:-

ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್‌ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.

ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್‌ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.

ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು

ಅಂದು ನಾಗರಾಜ್ ಕಾಣೆಯಾಗಿದ್ದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ :-

ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.

ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದ್ದು:-

`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.

`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.

ನಾಗರಾಜ್ ಆದ್ರು ನಿರ್ಮಲಾನಂದನಾಥ ಸ್ವಾಮೀಜಿ:-

ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.

ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.

ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.

ಶ್ರೀಗಳ ದಿನಚರಿ :-

ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.

ಕೃಪೆ: ಸಂಗ್ರಹ ಮಾಹಿತಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…