ಆಧ್ಯಾತ್ಮ

ವಿಜ್ಞಾನಿಯಾಗಿ ಆಯ್ಕೆಆಗಿದ್ದ ಇವರು, ಆಧ್ಯಾತ್ಮಿಕ ಗುರುಗಳಾಗಿದ್ದರ ಹಿಂದೆ ಇದೆ ಒಂದು ರೋಚಕ ಕತೆ..!ತಿಳಿಯಲು ಈ ಲೇಖನ ಓದಿ…

10062

ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.

ಶ್ರೀಗಳ ಜನನ ಮತ್ತು ಬಾಲ್ಯ:-

ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.

ಶ್ರೀಗಳ ವಿದ್ಯಾಭ್ಯಾಸ:-

ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.

ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.

ಶ್ರೀಗಳ ಎಂಜಿನಿಯರಿಂಗ್ ಪದವಿ:-

ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್‌ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.

ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್‌ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.

ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು

ಅಂದು ನಾಗರಾಜ್ ಕಾಣೆಯಾಗಿದ್ದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ :-

ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.

ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದ್ದು:-

`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.

`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.

ನಾಗರಾಜ್ ಆದ್ರು ನಿರ್ಮಲಾನಂದನಾಥ ಸ್ವಾಮೀಜಿ:-

ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.

ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.

ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.

ಶ್ರೀಗಳ ದಿನಚರಿ :-

ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.

ಕೃಪೆ: ಸಂಗ್ರಹ ಮಾಹಿತಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…