ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.
ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.
ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.
ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.
ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.
ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು
ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.
`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.
`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.
ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.
ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.
ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.
ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.
ಕೃಪೆ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…