ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.
ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.
ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.
ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.
ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.
ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು
ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.
`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.
`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.
ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.
ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.
ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.
ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.
ಕೃಪೆ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…