ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.