ಆರೋಗ್ಯ

ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

1149

ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್‌ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್‌ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್‌ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…