ಆರೋಗ್ಯ

ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

1176

ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್‌ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್‌ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್‌ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ, ಜೀವನಶೈಲಿ

    ನಿಂತ್ಕೊಂಡು ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ??? ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…