ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…