ಆರೋಗ್ಯ

ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

1164

ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್‌ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್‌ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್‌ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…