News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆರೋಗ್ಯ

ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

1176

ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್‌ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್‌ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್‌ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…