ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…