ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-
(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.
(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್ನಲ್ಲಿ ಮಾತನಾಡಲು ಸಾಧ್ಯ
(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.
(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.
ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.
(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.
ವಿಳಾಸ: ಮಯೂನ್ ಎನ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….