inspirational

ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

508

ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.

ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.

ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?

ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.

ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.

ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.

ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.

ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.

ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.

ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.

ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.

ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.

ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.

About the author / 

Chethan Ram

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…