ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.
ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.
ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?
ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.
ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.
ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.
ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.
ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.
ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.
ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.
ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.
ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…