News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

779

ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.

ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.

ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?

ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.

ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.

ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.

ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.

ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.

ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.

ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.

ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.

ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.

ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.

About the author / 

Chethan Ram

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.