ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.
ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.
ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?
ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.
ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.
ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.
ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.
ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.
ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.
ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.
ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.
ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…