News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

787

ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.

ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.

ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?

ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.

ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.

ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.

ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.

ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.

ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.

ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.

ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.

ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.

ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.

About the author / 

Chethan Ram

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • ಉಪಯುಕ್ತ ಮಾಹಿತಿ

    ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

    ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.