ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.
ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.
ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?
ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.
ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.
ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.
ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.
ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.
ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.
ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.
ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.
ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…