inspirational

ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

767

ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.

ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.

ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?

ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.

ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.

ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.

ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.

ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.

ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.

ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.

ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.

ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.

ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.

About the author / 

Chethan Ram

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…