ಸಿನಿಮಾ

ವಿಶ್ವದ ಎಲ್ಲಾ ಕನ್ನಡಿಗರಿಗೆ ಮನರಂಜನೆ ನೀಡುತ್ತಿದ್ದ “ಮಜಾ ಟಾಕೀಸ್”ಬಂದ್ ಆಗಲಿದೆಯಾ?ಇದು ನಿಜನಾ?ತಿಳಿಯಲು ಈ ಲೇಖನ ಓದಿ…

895

ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್‌ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್‌ ಸೂಪರ್ಸ್‌ನ ಫೇಸ್‌ ಬುಕ್‌ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್‌ಗಳ ಸುರಿಮಳೆಯಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.