ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…