ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…