ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…