ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.