ಉಪಯುಕ್ತ ಮಾಹಿತಿ, ತಂತ್ರಜ್ಞಾನ

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

143

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್‌ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್‌ ಮೂಲಕವೇ ಮಾಡಬಹುದಾಗಿದೆ.


ಎಂಜಿನಿಯರಿಂಗ್‌, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫ‌ಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್‌ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್‌ ರೂಪ ನೀಡಲಾಯಿತು.  ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.   ಹೀಗಾಗಿಯೇ  ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್‌ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್‌ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ.  ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಬದಲಾವಣೆ:-
ಸಿಇಟಿ ಸಾಫ್ಟ್ವೇರ್‌ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್‌ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬಹುದಾಗಿದೆ .

ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್‌ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್‌ಗಳ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್‌ನಲ್ಲೇ ಮಾಡಬಹುದು ಮತ್ತು  ಸೀಟು ಹಂಚಿಕೆಯ ಫ‌ಲಿತಾಂಶವನ್ನು ಮೊಬೈಲ್‌ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್‌ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್‌ ಫೋನ್‌ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್‌ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡುತ್ತಿದ್ದಾರೆ.

ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್‌ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್‌ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್‌ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು