ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…