ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.
ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.
ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.
ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.
ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.
ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.
ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.