ವಿಚಿತ್ರ ಆದರೂ ಸತ್ಯ

ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

142

ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.

 

ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.

ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.

ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.

ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.

ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.

ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.