ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.
ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.
ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.
ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.
ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.
ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.
ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…