ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.
ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.
ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.
ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.
ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.
ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.
ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.