ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…
ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.
ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.
ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.
ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.
ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!
ಕೃಪೆ : ಶ್ರೀದರ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….