ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…
ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.
ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.
ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.
ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.
ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!
ಕೃಪೆ : ಶ್ರೀದರ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…