ಆಧ್ಯಾತ್ಮ, ದೇವರು-ಧರ್ಮ

ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2160

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..?

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…

ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.

ಇದನ್ನೂ ಓದಿ:ಪಂಚಮುಖಿ ಆಂಜನೇಯನ ಅವತಾರದ ಹಿಂದೆ ಇದೆ ರೋಚಕ ಕತೆ…

ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.

ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇಲ್ಲಿ ಓದಿ :ಅಬ್ಬಬ್ಬಾ..!62 ಅಡಿ ಆಂಜನೇಯನ ಏಕಶಿಲಾವಿಗ್ರಹ,300 ಚಕ್ರದ ಲಾರಿ, ಮುಂದೆ ಓದಿ…

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.

ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಇಲ್ಲಿ ಓದಿ :ಉಗ್ರ ಹನುಮಂತನ ಚಿತ್ರ ಬಂದಿದ್ದು ಹೇಗೆ ಗೊತ್ತಾ..?

ಆಂಜನೇಯನ ಹೆಗಲೇರಿದ ಶನಿ ದೇವ…

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.

ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!

ಕೃಪೆ : ಶ್ರೀದರ್ ಭಟ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

    ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…