News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ದೇವರು-ಧರ್ಮ

ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2286

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..?

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…

ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.

ಇದನ್ನೂ ಓದಿ:ಪಂಚಮುಖಿ ಆಂಜನೇಯನ ಅವತಾರದ ಹಿಂದೆ ಇದೆ ರೋಚಕ ಕತೆ…

ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.

ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇಲ್ಲಿ ಓದಿ :ಅಬ್ಬಬ್ಬಾ..!62 ಅಡಿ ಆಂಜನೇಯನ ಏಕಶಿಲಾವಿಗ್ರಹ,300 ಚಕ್ರದ ಲಾರಿ, ಮುಂದೆ ಓದಿ…

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.

ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಇಲ್ಲಿ ಓದಿ :ಉಗ್ರ ಹನುಮಂತನ ಚಿತ್ರ ಬಂದಿದ್ದು ಹೇಗೆ ಗೊತ್ತಾ..?

ಆಂಜನೇಯನ ಹೆಗಲೇರಿದ ಶನಿ ದೇವ…

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.

ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!

ಕೃಪೆ : ಶ್ರೀದರ್ ಭಟ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

    ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….