News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ದೇವರು-ಧರ್ಮ

ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2264

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..?

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…

ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.

ಇದನ್ನೂ ಓದಿ:ಪಂಚಮುಖಿ ಆಂಜನೇಯನ ಅವತಾರದ ಹಿಂದೆ ಇದೆ ರೋಚಕ ಕತೆ…

ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.

ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇಲ್ಲಿ ಓದಿ :ಅಬ್ಬಬ್ಬಾ..!62 ಅಡಿ ಆಂಜನೇಯನ ಏಕಶಿಲಾವಿಗ್ರಹ,300 ಚಕ್ರದ ಲಾರಿ, ಮುಂದೆ ಓದಿ…

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.

ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಇಲ್ಲಿ ಓದಿ :ಉಗ್ರ ಹನುಮಂತನ ಚಿತ್ರ ಬಂದಿದ್ದು ಹೇಗೆ ಗೊತ್ತಾ..?

ಆಂಜನೇಯನ ಹೆಗಲೇರಿದ ಶನಿ ದೇವ…

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.

ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!

ಕೃಪೆ : ಶ್ರೀದರ್ ಭಟ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…