News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ, ದೇವರು-ಧರ್ಮ

ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2280

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..?

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…

ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.

ಇದನ್ನೂ ಓದಿ:ಪಂಚಮುಖಿ ಆಂಜನೇಯನ ಅವತಾರದ ಹಿಂದೆ ಇದೆ ರೋಚಕ ಕತೆ…

ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.

ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇಲ್ಲಿ ಓದಿ :ಅಬ್ಬಬ್ಬಾ..!62 ಅಡಿ ಆಂಜನೇಯನ ಏಕಶಿಲಾವಿಗ್ರಹ,300 ಚಕ್ರದ ಲಾರಿ, ಮುಂದೆ ಓದಿ…

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.

ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಇಲ್ಲಿ ಓದಿ :ಉಗ್ರ ಹನುಮಂತನ ಚಿತ್ರ ಬಂದಿದ್ದು ಹೇಗೆ ಗೊತ್ತಾ..?

ಆಂಜನೇಯನ ಹೆಗಲೇರಿದ ಶನಿ ದೇವ…

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.

ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!

ಕೃಪೆ : ಶ್ರೀದರ್ ಭಟ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ