News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸರ್ಕಾರಿ ಯೋಜನೆಗಳು

ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

268

ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

ಪ್ರತಿಭಾವಂತ ಹಾಗೂ ಭಿನ್ನವಾಗಿ ಯೋಚನೆ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ಈ ಯೋಜನೆ ಶುರು ಮಾಡಿದೆ.ಇನ್ನೋವೇಶನ್ ಪ್ರಶಸ್ತಿಗಾಗಿ ಎಸ್ ಐ ಆರ್, ಮೂಲ ಪರಿಕಲ್ಪನೆಗಳನ್ನು ಅಥವಾ ತಾಂತ್ರಿಕ ವಿನ್ಯಾಸ ಪರಿಕಲ್ಪನೆಯನ್ನು ಮಕ್ಕಳಿಂದ ಆಹ್ವಾನಿಸಿದೆ. 2018, ಜನವರಿ 1 ಪ್ರಕಾರ 18 ವರ್ಷ ಕೆಳಗಿನ ಹಾಗೂ ಯಾವುದೇ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಮಕ್ಕಳ ಪರಿಕಲ್ಪನೆ ಹೊಸದಾಗಿರಬೇಕು. ಇತ್ತೀಚಿನ ಸಮಸ್ಯೆಗೆ ಪರಿಹಾರವಾಗಿದ್ದರೆ ಉತ್ತಮ. ಆಯ್ಕೆಯಾದ 50 ಮಕ್ಕಳಿಗೆ ತರಬೇತಿ ನೀಡಲಾಗುವುದು. ಜೊತೆಗೆ ತಮ್ಮ ಪರಿಕಲ್ಪನೆಯನ್ನು ಮಕ್ಕಳು ಎಸ್ ಐ ಆರ್ ಮುಂದಿಡಬೇಕಾಗುತ್ತದೆ. ಆಯ್ಕೆಯಾದ ಐದು ಮಕ್ಕಳಿಗೆ ಬಹುಮಾನ ಸಿಗಲಿದೆ. 1 ಲಕ್ಷ, 50 ಸಾವಿರ, 30 ಸಾವಿರ, 20 ಸಾವಿರ ಹಾಗೂ 10 ಸಾವಿರ ರೂಪಾಯಿ ನೀಡಲಾಗುವುದು.

ಶಾಲೆಯ ವಿದ್ಯಾರ್ಥಿಗಳ ಒಂದು ಗುಂಪು ಹೊಸದೊಂದು ಆವಿಷ್ಕಾರ ಮಾಡಿದ್ದರೂ ಒಬ್ಬ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಗೆ ಮಾತ್ರ ಇದ್ರಲ್ಲಿ ಪಾಲ್ಗೊಳ್ಳಲು ಅವಕಾಶವಿರುತ್ತದೆ. ಹಿಂದಿ ಅಥವಾ ಇಂಗ್ಲೀಷ್ ನಲ್ಲಿ 5000 ಶಬ್ಧಕ್ಕಿಂತ ಹೆಚ್ಚಾಗದೆ ಪ್ರಸ್ತಾವನೆ ಕಳುಹಿಸಬೇಕು. ಇದ್ರ ಜೊತೆ ಶಾಲೆ ಹೆಸರು ಹಾಗೂ ಪ್ರಿನ್ಸಿಪಾಲರ ಪ್ರಮಾಣ ಪತ್ರವಿರಬೇಕು.

ಹೆಚ್ಚಿನ ಮಾಹಿತಿಗೆ  ಭೇಟಿ ನೀಡಿ:-www.csir.res.in ಅರ್ಜಿ ಸಲ್ಲಿಸಲು ಮಾರ್ಚ್ 31ರವರೆಗೆ ಅವಕಾಶವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ